ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರತೊಡಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ.
ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿ ಮಾಡಿದ ದಾವಣಗೆರೆ ಜಿಲ್ಲೆ ಗ್ರೀನ್ ಜೋನ್ ಗೆ ಸೇರ್ಪಡೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ನೀಡಿರುವ ಮಾಹಿತಿಯಂತೆ 28 ದಿನಗಳ ಅವಧಿಯಲ್ಲಿ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹೊಸ ಕೇಸ್ ಇಲ್ಲದ ಕಾರಣ ದಾವಣಗೆರೆ ಜಿಲ್ಲೆಯನ್ನು ಗ್ರೀನ್ ಜೋನ್ ಗೆ ಸೇರ್ಪಡೆ ಮಾಡಲಾಗಿದೆ.
ಆರೆಂಜ್ ಜೋನ್ ನಲ್ಲಿದ್ದ ದಾವಣಗೆರೆಯಲ್ಲಿ ಕಳೆದ 28 ದಿನಗಳಲ್ಲಿ ಒಂದೂ ಪಾಸಿಟಿವ್ ಪ್ರಕರಣ ದಾಖಲಾಗದ ಕಾರಣ ಗ್ರೀನ್ ಜೋನ್ ಗೆ ಸೇರಿದೆ. ಇದರಿಂದಾಗಿ ದಾವಣಗೆರೆ ಜಿಲ್ಲೆ ಜನರಿಗೆ ರಿಲೀಫ್ ಸಿಕ್ಕಂತಾಗಿದೆ.