alex Certify ಮಾನವೀಯತೆ ಮೆರೆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾನವೀಯತೆ ತೋರಿದ್ದಾರೆ.

ಬೆಂಗಳೂರಿನಿಂದ ಬಾಗಲಕೋಟೆಗೆ ಕಾರ್ಮಿಕರನ್ನು ಕರೆದುಕೊಂಡು ಹೋಗಿದ್ದ ಸಾರಿಗೆ ಸಂಸ್ಥೆ ಬಸ್ ವಾಪಸ್ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಬಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ಶರಣಪ್ಪ ಗಾಯಗೊಂಡಿದ್ದಾರೆ.

ರಸ್ತೆಯಲ್ಲಿ ಹಸು ಒಮ್ಮೆಲೆ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಈ ವೇಳೆ ಶರಣಪ್ಪ ಗಾಯಗೊಂಡಿದ್ದು, ಅದೇ ಮಾರ್ಗವಾಗಿ ತೆರಳುತ್ತಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾರ್ ನಿಲ್ಲಿಸಿ ಚಾಲಕ ಶರಣಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...