ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ ಚೆಕ್ ಬೇಡವೆಂದು ತಿಳಿಸಿರುವುದಾಗಿ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಭರಿಸುವ ಶಕ್ತಿ ಸರ್ಕಾರಕ್ಕೆ ಇದೆ. ನೀವು ಕೊಡುವುದಾದರೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದೇನೆ. ಸಿಎಂ ಕೊರೋನಾ ಪರಿಹಾರ ನಿಧಿಗೆ 150 ಕೋಟಿ ಕೊಟ್ಟು ಸಹಕರಿಸಲು ಹೇಳಿದ್ದೇನೆ ಎಂದಿದ್ದಾರೆ.
ಕೊಟ್ಟರೆ 150 ಕೋಟಿ ರೂ. ಕೊಟ್ಟು ಸರ್ಕಾರಕ್ಕೆ ಸಹಕರಿಸಲಿ. ಅದನ್ನು ಬಿಟ್ಟು ಒಂದು ಕೋಟಿ ರೂ. ಅವರ ವ್ಯಕ್ತಿತ್ವಕ್ಕೆ ಸರಿಹೊಂದುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಸರಿಹೊಂದುವುದಿಲ್ಲ ಎಂದು ಹೇಳಿದ್ದಾರೆ.