alex Certify ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ ಹೆಗ್ಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ ಹೆಗ್ಡೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮುಖ್ಯಸ್ಥ ದಿ.ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ವೈಟ್ ಫೀಲ್ಡ್ ನ ಶೆರಟಾನ್ ಹೋಟೆಲ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ನವಜೋಡಿಗಳು ಹಸೆಮಣೆಯೇರಿದರು. ಕನ್ಯಾದಾನ ಮಾಡುವಾಗ ಡಿ.ಕೆ.ಶಿವಕುಮಾರ್ ಭಾವುಕರಾಗಿ ಕಣ್ಣೀರಾದ ಘಟನೆಯೂ ನಡೆಯಿತು.

ಪ್ರೇಮಿಗಳ ದಿನವೇ ಸ್ಯಾಂಡಲ್ ವುಡ್ ಜೋಡಿ ಮದುವೆ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಾರ್ಲಿಂಗ್ ಕೃಷ್ಣ – ಮಿಲನಾ ನಾಗರಾಜ್

ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಪ್ರಭಾಕರ ಕೋರೆ, ಮುನಿರತ್ನ, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹಾಗೂ ವಿವಿಧ ಮಠಾಧೀಶರು ಭಾಗವಹಿಸಿ ನವ ವಧು-ವರರಿಗೆ ಶುಭ ಹಾರೈಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...