alex Certify ಪ್ರಧಾನಿಗೆ ಬಿಜೆಪಿ ನಾಯಕರ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರ್​ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿಗೆ ಬಿಜೆಪಿ ನಾಯಕರ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರ್​ ವ್ಯಂಗ್ಯ

ದೇಶದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ ಬಳಿಕ ಭಾಷಣ ಮಾಡಿದ್ದು ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳಿಗೆ ಫುಲ್​ ಪವರ್​ ನೀಡಿದ್ದಾರೆ. ಪ್ರತಿ ಜಿಲ್ಲೆಯ ಡಿಸಿ ಫೀಲ್ಡ್ ಕಮಾಂಡರ್​ನಂತೆ ಕೆಲಸ ಮಾಡಬೇಕು ಎಂದು ಪ್ರಧಾನಿ ಇಂದು ಹೇಳಿದ್ರು.

ಪ್ರಧಾನಿ ಮೋದಿಯ ಈ ಭಾಷಣದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಬಿಜೆಪಿ ನಾಯಕರಿಗೆ ಭರ್ಜರಿ ಟಾಂಗ್​ ನೀಡಿದ್ರು. ಪ್ರಧಾನಿ ಮೋದಿಗೆ ಬಿಜೆಪಿ ನಾಯಕರು ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗ್ತಾರೆ ಎಂಬ ನಂಬಿಕೆ ಇಲ್ಲ. ಹೀಗಾಗಿಯೇ ಡಿಸಿಗಳ ಜೊತೆ ಸಭೆ ನಡೆಸಿ ಅವರಿಗೆ ಅಧಿಕಾರ ನೀಡಿದ್ದಾರೆ ಎಂದು ಕುಹಕ ಮಾಡಿದ್ರು.

ಅಲ್ಲದೇ ಕೊರೊನಾ ವಿಶೇಷ ಪ್ಯಾಕೇಜ್​ ಸಂಬಂಧವೂ ಮಾತನಾಡಿದ ಅವ್ರು. ಕಳೆದ ವರ್ಷ ಕೇಂದ್ರ ಸರ್ಕಾರ ಘೋಷಣೆ ಮಾಡಿದ ವಿಶೇಷ ಪ್ಯಾಕೇಜ್​ ಇನ್ನೂ ಹಲವರ ಕೈಗೆ ಸಿಕ್ಕಿಲ್ಲ. ನೇಕಾರರು, ಮಡಿವಾಳರು ಸೇರಿದಂತೆ ಹಲವರಿಗೆ ಇನ್ನೂ ಪ್ಯಾಕೇಜ್​​ನ ಅನುದಾನ ಹಂಚಿಕೆಯಾಗಿಲ್ಲ ಎಂದು ಗುಡುಗಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...