ಮೈಸೂರು: ಮದ್ಯದ ನಶೆಯಲ್ಲಿ ಪ್ರೀತಿ ವಿಚಾರಕ್ಕೆ ಜಗಳವಾಗಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ್ನೇ ಇಬ್ಬರು ಗೆಳೆಯರು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಸತೀಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಆರೋಪಿಗಳಾದ ಮಧು, ಕಿರಣ್ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ಘಟನೆ ನಡೆದಿದೆ.
ಗೆಳೆಯರು ಮದ್ಯ ಸೇವಿಸಿ ಪಾರ್ಟಿ ಮಾಡುವಾಗ ಪ್ರೀತಿ ಮಾಡುವ ವಿಚಾರಕ್ಕೆ ಜಗಳವಾಗಿ ವಿಕೋಪಕ್ಕೆ ತಿರುಗಿದೆ. ಸತೀಶ್ ನನ್ನು ಹತ್ಯೆ ಮಾಡಿದ ಬಳಿಕ ಮಧು ಮತ್ತು ಕಿರಣ್ ಪರಾರಿಯಾಗಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.