ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಮುಂದುವರೆದಿದೆ. ನಟಿ ರಾಗಿಣಿ, ಅವರ ಸ್ನೇಹಿತ ರವಿಶಂಕರ್, ಮತ್ತೊಬ್ಬ ನಟಿ ಆಪ್ತ ರಾಹುಲ್ ಅವರನ್ನು ಬಂಧಿಸಲಾಗಿದೆ. ಇವತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮಾಜಿ ಸಚಿವ ದಿ. ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ 5 ನೇ ಆರೋಪಿಯಾಗಿ ಆದಿತ್ಯ ಆಳ್ವ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ನಾಪತ್ತೆಯಾಗಿರುವ ಆದಿತ್ಯ ಆಳ್ವಗಾಗಿ ಸಿಸಿಬಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಉಳಿದ ಆರೋಪಿಗಳನ್ನು ವಶಕ್ಕೆ ಪಡೆಯಲು ಬಲೆ ಬೀಸಿದ್ದಾರೆ. ಪ್ರಕರಣದ 5 ನೇ ಆರೋಪಿ ವೈಭವ್ ಜೈನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಕ್ವಾರಂಟೈನ್ ನಲ್ಲಿದ್ದಾರೆ ಎನ್ನಲಾಗಿದೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಗುವುದು.