ಶಿವಮೊಗ್ಗ ತಾಲ್ಲೂಕು ಹಾರನಹಳ್ಳಿ ಗ್ರಾಮದಲ್ಲಿ ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನಕಲಿ ಅಧಿಕಾರಿಯನ್ನು ಬಂಧಿಸಲಾಗಿದೆ.
ಶಿವಮೊಗ್ಗ ಟಿಪ್ಪುನಗರದ ಮೊಹಮ್ಮದ್ ನಕೇರಿ ಮತ್ತು ಮೊಹಮ್ಮದ್ ರಫೀಕ್ ಬಂಧಿತ ಆರೋಪಿಗಳು. ಇವರು ಹಾರನಹಳ್ಳಿಯಲ್ಲಿ ಮಾಸ್ಕ್ ಧರಿಸದವರಿಗೆ ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ. ಅಲ್ಲದೆ, ಬೈಕ್ ಸವಾರರನ್ನು ತಡೆದು ತಾವು ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು ಎಂದು ಹೇಳಿ ಹಣ ವಸೂಲಿ ಮಾಡಿದ್ದಾರೆ.
ಇವರ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಇಬ್ಬರನ್ನು ವಿಚಾರಿಸಿದಾಗ ನಕಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನಕಲಿ ಅಧಿಕಾರಿ ಎನ್ನುವುದು ಗೊತ್ತಾಗಿದೆ. ಇಬ್ಬರಿಗೂ ಧರ್ಮದೇಟು ನೀಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.