alex Certify BIG NEWS: ರಾಜ್ಯ ಸರ್ಕಾರದ ವಿಶೇಷ ಪರಿಹಾರ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ: ರೈತರು, ಕಾರ್ಮಿಕರಿಗೆ ಸಿಎಂ BSY ʼಬಂಪರ್ʼ ಗಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದ ವಿಶೇಷ ಪರಿಹಾರ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ: ರೈತರು, ಕಾರ್ಮಿಕರಿಗೆ ಸಿಎಂ BSY ʼಬಂಪರ್ʼ ಗಿಫ್ಟ್

ಬೆಂಗಳೂರು: ಕಾರ್ಮಿಕರು, ರೈತರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಗಿಫ್ಟ್ ನೀಡಲಾಗಿದೆ. ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ 1777 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಹ್ಯಾಂಡ್ ಲೂಮ್ ಘಟಕಗಳ ಪ್ರತಿ ಕಾರ್ಮಿಕರಿಗೆ 2000 ರೂ. ನೀಡಲಾಗುವುದು.

ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು ಪ್ರತಿ ಹೆಕ್ಟೇರ್ ಗೆ 15 ಸಾವಿರ ರೂ. ನೀಡಲಾಗುವುದು. ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ 137 ಕೋಟಿ ರೂಪಾಯಿ, ಪ್ಯಾಕೇಜ್ ಹ್ಯಾಂಡ್ಲೂಮ್ ಘಟಕಗಳ ಕಾರ್ಮಿಕರಿಗೆ 25 ಕೋಟಿ ರೂ. ಪ್ಯಾಕೇಜ್ ನೀಡಲಾಗುವುದು.

ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು ಪ್ರತಿ ಹೆಕ್ಟೇರಿಗೆ 15 ಸಾವಿರ ರೂ. ಘೋಷಣೆ ಮಾಡಲಾಗಿದೆ. 7 ಹಣ್ಣುಗಳು ಮತ್ತು 10 ತರಕಾರಿ ಬೆಳೆಗಳಿಗೆ ಪ್ಯಾಕೇಜ್ ಅನ್ವಯವಾಗಲಿದೆ. ಬಾಳೆ, ಪಪ್ಪಾಯಿ, ಟೇಬಲ್ ದ್ರಾಕ್ಷಿ, ಅಂಜೂರ, ಅನಾನಸ್, ಕಲ್ಲಂಗಡಿ ಮತ್ತು ಕರಬೂಜ, ಬೋರೆ, ಬೆಣ್ಣೆ ಹಣ್ಣು, ತರಕಾರಿ ಬೆಳೆಗಳಾದ ಟೊಮೆಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದಗುಂಬಳ, ಕ್ಯಾರೆಟ್, ಈರುಳ್ಳಿ, ದಪ್ಪಮೆಣಸಿನಕಾಯಿ, ಸೊಪ್ಪು, ಹೀರೇಕಾಯಿ, ತೊಂಡೆಕಾಯಿ ಬೆಳೆದ ರೈತರಿಗೆ ಪರಿಹಾರ ನೀಡಲಾಗುವುದು.

ಈ ಹಿಂದೆ ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂಪಾಯಿ ಪರಿಹಾರ ನೀಡಲು ತೀರ್ಮಾನಿಸಲಾಗಿತ್ತು. ಈಗ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪ್ರತಿ ಹೆಕ್ಟೇರಿಗೆ 15 ಸಾವಿರ ರೂಪಾಯಿಯಂತೆ 137 ಕೋಟಿ ರೂಪಾಯಿ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಪ್ರತಿ ಕೈಮಗ್ಗ ನೇಕಾರರಿಗೆ ಎರಡು ಸಾವಿರ ರೂಪಾಯಿಗಳಂತೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಪ್ರಸ್ತುತ ಒಂದು ಬಾರಿಗೆ ಪರಿಹಾರ ಸೌಲಭ್ಯವನ್ನು ರಾಜ್ಯದಲ್ಲಿರುವ 1.25 ಲಕ್ಷ ವಿದ್ಯುತ್ಚಾಲಿತ ಘಟಕಗಳಿಗೆ ಕೂಡ ವಿಸ್ತರಿಸಲು ನಿರ್ಧರಿಸಲಾಗಿದೆ. ಕಾರ್ಮಿಕರಿಗೆ 2000 ರೂ. ಗಳಂತೆ ಒಟ್ಟು 25 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...