ಲಾಕ್ ಡೌನ್ ಸಡಿಲಗೊಂಡ ನಂತರ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಇದೇ ವೇಳೆ ರೈತರಿಗೆ ಮಳೆರಾಯ ಕೃಪೆ ತೋರಿದ್ದು ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭವಾಗಿದೆ. ಮತ್ತೆ ಕೆಲವೆಡೆ ಬಿತ್ತನೆಗೆ ಭೂಮಿ ಹದಗೊಳಿಸಲು ಉಳುಮೆ ಮಾಡಲಾಗುತ್ತಿದೆ.
ಕಿಸಾನ್ ಸಮ್ಮಾನ್ ಯೋಜನೆ ಹಣವನ್ನು ರೈತರ ಖಾತೆಗೆ ಹಾಕಲಾಗಿದೆ. ಇದೇ ವೇಳೆ ನಕಲಿ ಬಿತ್ತನೆಬೀಜ, ರಸಗೊಬ್ಬರ ತಡೆಗೆ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ರೈತ ಸಮುದಾಯ ಉತ್ಸಾಹದೊಂದಿಗೆ ಮುಂಗಾರುಪೂರ್ವ ಬಿತ್ತನೆಯನ್ನು ಶುರು ಮಾಡತೊಡಗಿದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ರೈತ ಸಂಪರ್ಕ ಕೇಂದ್ರಗಳ ಮೂಲಕ ಗೊಬ್ಬರ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಮುಂಗಾರು ಪೂರ್ವ ಮಳೆಯಾಗಿರುವುದರಿಂದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭವಾಗಿವೆ.
ಕೆಲವೆಡೆ ಬಿತ್ತನೆಗೆ ಭೂಮಿಯನ್ನು ಸಿದ್ಧಪಡಿಸಲಾಗುತ್ತಿದೆ. ಹವಾಮಾನ ಇಲಾಖೆಗೆ ಈ ಬಾರಿ ನಿಗದಿಯಂತೆಯೇ ಮುಂಗಾರು ಆಗಮಿಸಲಿದ್ದು, ವಾಡಿಕೆಯಂತೆ ಸಂಪೂರ್ಣ ಮಳೆಯಾಗಲಿದೆ ಎಂದು ಹೇಳಿರುವುದರಿಂದ ರೈತ ಸಮುದಾಯದಲ್ಲಿ ಖುಷಿ ತಂದಿದ್ದು, ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಜೋರಾಗಿ ನಡೆದಿದೆ.