alex Certify BIG BREAKING: ಮನೆ ಹಾನಿಗೆ 5 ಲಕ್ಷ, ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ – ಸಿಎಂ ಯಡಿಯೂರಪ್ಪ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮನೆ ಹಾನಿಗೆ 5 ಲಕ್ಷ, ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ – ಸಿಎಂ ಯಡಿಯೂರಪ್ಪ ಘೋಷಣೆ

ಮೈಸೂರು: ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ.

ಮೈಸೂರಿಗೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಎರಡು ಮೂರು ದಿನ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಐದಾರು ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಪ್ರವಾಹ ಉಂಟಾಗಿದೆ. ಸಾವಿರಾರು ಮನೆಗಳು, ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ನೆರವು ನೀಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಕ್ಷಣ 10 ಸಾವಿರ ರೂ. ತಾತ್ಕಾಲಿಕವಾಗಿ ಪರಿಹಾರ ನೀಡಲಾಗುವುದು. NDRF ನಿಂದ ಕಡಿಮೆ ಹಣ ಬಂದರೂ ಮತ್ತಷ್ಟು ಹಣ ಹಾಕಿ ಮನೆ ಕಟ್ಟಿಸಿಕೊಡುತ್ತೇವೆ ವಾರದ ಬಳಿಕ ಪ್ರವಾಹ ನಷ್ಟದ ಅಂದಾಜು ವರದಿ ಸಿದ್ಧಪಡಿಸಲಾಗುವುದು. ಸಮಗ್ರ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...