alex Certify ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ ಮಾಡಿದ್ದಾರೆ.

ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ಕೇತಗಾನಹಳ್ಳಿಯ ನನ್ನ ‘ಕೃಷಿ ಭೂಮಿ’ಗೆ ಬಸವಜಯಂತಿಯ ಈ ಶುಭದಿನದಂದು ಕಪಿಲ, ಸ್ವರ್ಣಕಪಿಲ, ಗಿರ್ ತಳಿಯ ನಾಲ್ಕು ಗೋವುಗಳನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಹಸುಗಳನ್ನು ನನ್ನ ಕುಟುಂಬ ಭಕ್ತಿಪೂರ್ವಕವಾಗಿ ಪೂಜಿಸಿದ ಸಂಭ್ರಮದ ಕ್ಷಣಗಳಿವು ಎಂದು ಟ್ವೀಟಾಯಿಸಿದ್ದಾರೆ.

ಹೆಚ್​.ಡಿ. ಕುಮಾರಸ್ವಾಮಿ ಟ್ವಿಟರ್​ನಲ್ಲಿ ಶೇರ್​ ಮಾಡಿರುವ ಫೋಟೋಗಳಲ್ಲಿ ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್​ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್​​ ಇದ್ದಾರೆ. ರೇವತಿ ನಿಖಿಲ್​​ ಗೋವುಗಳಿಗೆ ಪೂಜೆ ಮಾಡಿ ಫಲವನ್ನ ತಿನ್ನಲು ನೀಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...