alex Certify ಪತ್ನಿಯ ಕಾಮದಾಹಕ್ಕೆ ಬಲಿಯಾದ ಪತಿರಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಕಾಮದಾಹಕ್ಕೆ ಬಲಿಯಾದ ಪತಿರಾಯ

ಗದಗ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಘಟನೆ ಗದಗ ಸಮೀಪದ ಕಬ್ಬಲಾಯತಕಟ್ಟಿ ತಾಂಡಾದಲ್ಲಿ ನಡೆದಿದೆ.

ಲಕ್ಷ್ಮಣ(39) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಈತನ ಪತ್ನಿ ಲಲಿತಾ ಹಾಗೂ ಪ್ರಿಯಕರ ಅತ್ತಿಕಟ್ಟಿ ತಾಂಡಾ ನಿವಾಸಿ ಸೋಮಪ್ಪ ಕೊಲೆ ಆರೋಪಿಗಳಾಗಿದ್ದಾರೆ.

ಮೃತ ಲಕ್ಷ್ಮಣ ದಂಪತಿ ಮತ್ತು ಸೋಮಪ್ಪ ಗೋವಾದಲ್ಲಿ ಈ ಹಿಂದೆ ಮೀನು ವ್ಯಾಪಾರ ಮಾಡುತ್ತಿದ್ದರು. ಲಲಿತಾ ಮತ್ತು ಸೋಮಪ್ಪ ನಡುವೆ ಅಕ್ರಮ ಸಂಬಂಧ ಬೆಳೆದಿದ್ದು ಈ ವಿಷಯ ತಿಳಿದು ಲಕ್ಷ್ಮಣ ದಂಪತಿ ನಡುವೆ ಜಗಳವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.

ಅನೇಕ ವರ್ಷಗಳಿಂದ ಅಕ್ರಮ ಸಂಬಂಧ ಮುಂದುವರೆಸಿದ್ದ ಪತ್ನಿಯೊಂದಿಗೆ ಲಕ್ಷ್ಮಣ ಜಗಳವಾಡುತ್ತಿದ್ದ. ಇದರಿಂದ ಬೇಸತ್ತ ಲಲಿತಾ ಪ್ರಿಯಕರನೊಂದಿಗೆ ಸೇರಿ ಗುರುವಾರ ತಡರಾತ್ರಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಮೃತದೇಹದೊಂದಿಗೆ ರಾತ್ರಿ ಕಳೆದ ಆಕೆ ಬೆಳಿಗ್ಗೆ ನೆರೆಹೊರೆಯವರಿಗೆ ಗಂಡ ಏಳುತ್ತಿಲ್ಲ ಎಂದು ತಿಳಿಸಿದ್ದಾಳೆ. ಅಕ್ಕಪಕ್ಕದವರು ಬಂದು ನೋಡಿದಾಗ ಲಕ್ಷ್ಮಣ ಮೃತಪಟ್ಟಿರುವುದು ಗೊತ್ತಾಗಿದೆ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಯ ಮೇಲೆ ಗಾಯದ ಗುರುತು ಕಂಡುಬಂದಾಗ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...