alex Certify ಶಿವಮೊಗ್ಗದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಜಿಲೆಟಿನ್ ಸ್ಫೋಟ; ಸಂಪೂರ್ಣ ಛಿದ್ರಗೊಂಡ ಮನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಜಿಲೆಟಿನ್ ಸ್ಫೋಟ; ಸಂಪೂರ್ಣ ಛಿದ್ರಗೊಂಡ ಮನೆ

ತುಮಕೂರು: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ವೇಳೆ ಜಿಲೆಟಿನ್ ಸ್ಫೋಟಗೊಂಡು ಸಂಭವಿಸಿದ ದುರ್ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಇಂಥದ್ದೇ ಘಟನೆ ನಡೆದಿದ್ದು, ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ.

ತುಮಕೂರಿನ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಜಿಲೆಟಿನ್ ಸ್ಫೊಟಗೊಂಡಿದ್ದು, ಮನೆ ಸಂಪೂರ್ಣ ಧ್ವಂಸಗೊಂಡಿದೆ. ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದಾರೆ.

ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿ ಜಿಲೆಟಿನ್ ಕಡ್ಡಿ ಸಂಗ್ರಹಿಸಿಟ್ಟಿದ್ದರು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...