alex Certify ಪ್ರಾಮಾಣಿಕತೆ ಮೆರೆದ ಪಿಎಸ್ಐ, ಸಾರ್ವಜನಿಕರಿಂದ ಮೆಚ್ಚುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಮಾಣಿಕತೆ ಮೆರೆದ ಪಿಎಸ್ಐ, ಸಾರ್ವಜನಿಕರಿಂದ ಮೆಚ್ಚುಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆಯ ಪಿಎಸ್ಐ ನವೀನ್ ಮಠಪತಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಮಾಲೀಕರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಮೇ 23ರಂದು ಸಾಗರ ರಸ್ತೆಯ ಚೋರಡಿ ಬಳಿ ಕಾರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಭಾರತಿ ಮೃತಪಟ್ಟಿದ್ದರು. ಪತ್ನಿ ಕಳೆದುಕೊಂಡ ದುಃಖದಲ್ಲಿದ್ದ ಅವರ ಪತಿ ಸುಬ್ಬಯ್ಯ ಅವರಿಗೆ ಪೊಲೀಸರು ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ. ಸುಬ್ಬಯ್ಯ ಸಂಬಂಧಿಕರೊಂದಿಗೆ ಪೊಲೀಸ್ ಠಾಣೆಗೆ ಹೋದ ಸಂದರ್ಭದಲ್ಲಿ ಅಪಘಾತವಾದ ಸ್ಥಳದಲ್ಲಿ ಸಿಕ್ಕಿದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪಿಎಸ್ಐ ನವೀನ್ ಮಠಪತಿ ಕೊಟ್ಟಿದ್ದಾರೆ.

ಭಾರತಿ ಮನೆಯಿಂದ ಚಿನ್ನಾಭರಣಗಳನ್ನು ತೆಗೆದುಕೊಂಡು ಬಂದಿರುವುದನ್ನು ಪತಿಗೆ ತಿಳಿಸಿರಲಿಲ್ಲ. ಪತ್ನಿ ಮೃತಪಟ್ಟಿದ್ದರಿಂದ ಚಿನ್ನಾಭರಣದ ಬಗ್ಗೆ ಸುಬ್ಬಯ್ಯನವರು ಕೂಡ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪಿಎಸ್ಐ ಮಠಪತಿಯವರು ಸ್ಥಳದಲ್ಲಿ ದೊರೆತ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಠಾಣೆಗೆ ತಂದು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...