alex Certify ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳಿಸಲಾಗಿದ್ದು ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಾಲಾ ವಾಪಸ್ ಕಳುಹಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಣಯವನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಂಕಷ್ಟದ ಸಮಯದಲ್ಲಿ ಬೆಂಬಲ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳು, ಖಾಸಗಿ ಕಂಪನಿಗಳು ದರ ನಿಗದಿಪಡಿಸುತ್ತವೆ. ಎಪಿಎಂಸಿಗಳಿಗೆ ಕ್ರಮೇಣ ಬಾಗಿಲು ಹಾಕುವ ಪರಿಸ್ಥಿತಿ ಬರುತ್ತದೆ. ಸರ್ಕಾರದ ಆದಾಯ ಕಡಿತವಾಗುತ್ತದೆ. ಮಧ್ಯವರ್ತಿಗಳ ಮೂಲಕ ಕಾರ್ಪೊರೇಟ್ ಕಂಪನಿಗಳು ಗ್ರಾಮಗಳನ್ನು ಹತೋಟಿಗೆ ತೆಗೆದುಕೊಳ್ಳುವ ಆತಂಕ ಜೊತೆಗೆ ರೈತರ ಆದಾಯ ಹೆಚ್ಚಿಸುವ ಆಶಯಕ್ಕೆ ಧಕ್ಕೆ ಉಂಟಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ತೀವ್ರ ವಿರೋಧ ವ್ಯಕ್ತವಾಗಿದ್ದು ರಾಜ್ಯಪಾಲರ ಬಳಿಗೆ ಹೋಗಿದ್ದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಲಾಗಿದೆ. ಸಂಪುಟದ ಅನುಮೋದನೆ ಪಡೆದು ಕಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...