ಬೆಂಗಳೂರು: ಉಚಿತ ಅಡುಗೆ ಅನಿಲ ವಿತರಣೆ ಘೋಷಿತ ಯೋಜನೆಗಳಿಗೆ ಮಾತ್ರ ಸೀಮಿತ. ಉಳಿದವರಿಗೆ ಉಚಿತ ಗ್ಯಾಸ್ ಪೂರೈಸುವ ಸ್ಥಿತಿಯಲ್ಲಿ ಇಲ್ಲವೆಂದು ಹೈಕೋರ್ಟ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಉಜ್ವಲ ಯೋಜನೆ, ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅಡಿ ಫಲಾನುಭವಿಗಳಿಗೆ ಮಾತ್ರ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸಲಾಗುವುದು. 3 ಸಿಲಿಂಡರ್ ಗಳನ್ನು ಮಾತ್ರ ಉಚಿತವಾಗಿ ನೀಡಲಾಗುವುದು. ಉಳಿದವರಿಗೆ ಉಚಿತವಾಗಿ ಸಿಲಿಂಡರ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದ್ದು, ಸರ್ಕಾರದ ನೀತಿಯ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.