ಮೇ ಮತ್ತು ಜೂನ್ ತಿಂಗಳಲ್ಲಿ ಅಧಿಕಾರವಧಿ ಪೂರ್ಣಗೊಳ್ಳಲಿರುವ ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಉಪಸಮಿತಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಧಿಕಾರ ಅವಧಿ ಪೂರ್ಣಗೊಂಡ ಸದಸ್ಯರ ಅಧಿಕಾರ ಅವಧಿ ವಿಸ್ತರಣೆ ಮಾಡುವುದು, ಆಡಳಿತಾಧಿಕಾರಿ ನೇಮಿಸುವುದು ಅಥವಾ ಚುನಾವಣೆ ನಡೆಸುವುದು. ಹೀಗೆ ಸರ್ಕಾರದ ಮುಂದೆ ಮೂರು ಆಯ್ಕೆಗಳಿವೆ. ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮದ್ಯ ಮಾರಾಟಕ್ಕೆ ವಿರೋಧವಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಬೇಕಾಗುತ್ತದೆ. ನೆರೆ ಮತ್ತು ಅವನ ಪರಿಣಾಮ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.