alex Certify ‘ಡಿ.ಕೆ. ಶಿವಕುಮಾರ್ ಸಿಎಂ ಆಗಲು RR ನಗರ, ಶಿರಾದಲ್ಲಿ ಗೆಲ್ಲಲೇಬೇಕು: ಸಮುದಾಯ ಒಗ್ಗಟ್ಟಿನಿಂದ ವೋಟ್ ಹಾಕಬೇಕು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿ.ಕೆ. ಶಿವಕುಮಾರ್ ಸಿಎಂ ಆಗಲು RR ನಗರ, ಶಿರಾದಲ್ಲಿ ಗೆಲ್ಲಲೇಬೇಕು: ಸಮುದಾಯ ಒಗ್ಗಟ್ಟಿನಿಂದ ವೋಟ್ ಹಾಕಬೇಕು’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಅಂದ್ರೆ ಉಪಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ತಂದೆ ಹನುಮಂತರಾಯಪ್ಪ ಹೇಳಿದ್ದಾರೆ.

ಈ ಬಾರಿ ನಮ್ಮ ಸಮುದಾಯ ಒಗ್ಗಟ್ಟಾಗಿರಬೇಕು ಎಂದು ಅವರು ಹೇಳಿದ್ದು, ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಒಕ್ಕಲಿಗರು ಒಗ್ಗಟ್ಟಿನಿಂದ ಮತ ಹಾಕಬೇಕು. ಬಿಜೆಪಿಯವರು ಮುನಿರತ್ನಂ ನಾಯ್ಡು ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಅವರು ಯಾವ ಒಬ್ಬ ಒಕ್ಕಲಿಗ ನಾಯಕರನ್ನು ಬೆಳೆಸಿಲ್ಲ ಎಂದು ಆರೋಪಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದ್ರೆ ಈ ಎರಡು ಕ್ಷೇತ್ರಗಳಲ್ಲಿ ಗೆಲ್ಲಬೇಕು. ನಮ್ಮ ಸಮುದಾಯದ ಮತ ಹಂಚಿ ಹೋಗಬಾರದು. ಈ ಸಲವಾದರೂ ನಮ್ಮ ಸಮುದಾಯ ಒಗ್ಗಟ್ಟಾಗಿರಬೇಕು ಎಂದು ಹೇಳಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...