ಬೆಂಗಳೂರು: ಕಲ್ಬುರ್ಗಿಯಲ್ಲಿ ಈ ಸಲದ ಬೇಸಿಗೆ ಗರಿಷ್ಠ ಉಷ್ಣಾಂಶ 44 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಅದೇ ರೀತಿ ಬೀದರ್, ರಾಯಚೂರು, ಬಿಜಾಪುರ ಸೇರಿದಂತೆ ಅನೇಕ ಕಡೆ ತಾಪಮಾನ ಜಾಸ್ತಿಯಾಗಿದೆ.
ಕಲ್ಬುರ್ಗಿಯಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ತಲುಪಿದೆ. ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಅಂಡಮಾನ್ ಸಮೀಪದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಮೇ 7 ರ ಇಂದು ಮತ್ತು ನಾಳೆ ಮತ್ತು ಮೇ 11 ರಂದು ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.