ರಾಮನಗರ: ಖಾಸಗಿ ವಾಹಿನಿ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಮನಗರದಲ್ಲಿ ಬೆಳಿಗ್ಗೆ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಎಟಿಎಂ ವಾಹನ ಡಿಕ್ಕಿ ಹೊಡೆದು ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
31 ವರ್ಷದ ಹನುಮಂತು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಪಡುವಣಗೆರೆ ಗ್ರಾಮದವರಾಗಿದ್ದಾರೆ. ಪತ್ನಿ, ಒಂದು ವರ್ಷದ ಹೆಣ್ಣು ಮಗು ಇದೆ. ಸಂಸದ ಡಿ.ಕೆ. ಸುರೇಶ್ ಅವರು ಅಂತಿಮ ದರ್ಶನ ಪಡೆದು ಅವರ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದ್ದಾರೆ. ಅಂತೆಯೇ ಡಿ.ಕೆ. ಶಿವಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹನುಮಂತು ನಿಧನಕ್ಕೆ ಸಂತಾಪ ಸೂಚಿಸಿದ್ದು ಮೃತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ವೈಯಕ್ತಿಕ ನೆರವು ನೀಡುವುದಾಗಿ ಹೇಳಿದ್ದಾರೆ.