ಸೋಮವಾರದಿಂದ ಹೋಟೆಲ್ ಗಳಲ್ಲಿ ಸರ್ವಿಸ್ ಆರಂಭವಾಗುವ ಸಾಧ್ಯತೆಯಿದೆ. ಸುಮಾರು ಎರಡೂವರೆ ತಿಂಗಳ ಕಾಲ ಬಂದ್ ಆಗಿದ್ದ ಹೋಟೆಲ್ ಗಳು ಸೋಮವಾರದಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.
ಹೋಟೆಲ್, ಉಪಹಾರ ಮಂದಿರ, ಕೆಫೆ, ಜ್ಯೂಸ್ ಸೆಂಟರ್ ಮೊದಲಾವುಗಳು ಓಪನ್ ಆಗಲಿದ್ದು, ಗ್ರಾಹಕರು ಬಹುದಿನಗಳ ಬಳಿಕ ರುಚಿ ಸವಿಯಬಹುದಾಗಿದೆ ಎನ್ನಲಾಗಿದೆ.
ಹೋಟೆಲ್ ಮಾಲೀಕರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಎಲ್ಲಾ ನಿಯಮಗಳನ್ನು ಪಾಲಿಸುವುದರೊಂದಿಗೆ ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸರ್ವಿಸ್ ಗೆ ಅವಕಾಶ ನೀಡಲಾಗುವುದು. ಹೋಟೆಲ್ ತೆರೆಯಲು ಅನುಮತಿ ನೀಡಬೇಕೆಂದು ಮನವಿ ಮಾಡಲಾಗಿದೆ. ಇದಕ್ಕೆ ಸಿಎಂ ಒಪ್ಪಿದ್ದು ಜೂನ್ 1 ರಿಂದ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಹೋಟೆಲ್ ಗಳಲ್ಲಿ ಸೋಮವಾರದಿಂದ ಕಾರ್ಯಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮೈಸೂರಿನಲ್ಲಿ ಹೋಟೆಲ್ ಗಳನ್ನು ಆರಂಭಿಸಲು ಸಿದ್ಧತೆಗಳು ನಡೆದಿದೆ. ಹೋಟೆಲ್ ಗಳು ಓಪನ್ ಆಗಿದ್ದರು ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಿದ್ದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿಯಾಗಿದೆ. ಈಗ ಹೋಟೆಲ್ಗಳಲ್ಲಿ ಗ್ರಾಹಕರಿಗೆ ರುಚಿ ಸವಿಯಲು ಅವಕಾಶ ಸಿಗುವ ನಿರೀಕ್ಷೆಯಲ್ಲಿ ಹೋಟೆಲ್ ಮಾಲೀಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.