alex Certify ಇನ್ನು 2-3 ತಿಂಗಳು ಸಾಲ, ಬಡ್ಡಿಗೆ ಪೀಡಿಸುವಂತಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು 2-3 ತಿಂಗಳು ಸಾಲ, ಬಡ್ಡಿಗೆ ಪೀಡಿಸುವಂತಿಲ್ಲ

 ಧಾರವಾಡ: ಕೊರೊನಾ ಸಂಕಷ್ಟದ ಸಮಯದಲ್ಲಿ ಸಾಲಗಾರರಿಗೆ ಸಾಲ, ಬಡ್ಡಿ ಪಾವತಿಸುವಂತೆ ಪೀಡಿಸುವಂತಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕೊರೋನಾ ಸಂಕಷ್ಟದ ಸಮಯದಲ್ಲಿ ಮೈಕ್ರೋಫೈನಾನ್ಸ್, ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಬ್ಯಾಂಕ್ ನವರು ಸಾಲ, ಬಡ್ಡಿಯನ್ನು ಪಾವತಿಸುವಂತೆ ಸಾಲಗಾರರಿಗೆ ಕಿರುಕುಳ ನೀಡಬಾರದು. ಕಿರುಕುಳ ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಕಷ್ಟದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇನ್ನೂ ಎರಡು ಮೂರು ತಿಂಗಳ ಕಾಲ ಬಡ್ಡಿ ಅಥವಾ ಸಾಲ ಕಟ್ಟಲು ಬಲವಂತ ಮಾಡಬಾರದು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು, ಬ್ಯಾಂಕರ್ ಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...