alex Certify ಶಿವಮೊಗ್ಗದ ಶಂಕಿತ ಉಗ್ರನ ಸುಳಿವು ನೀಡಿದ್ರೆ 3 ಲಕ್ಷ ರೂ. ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಶಂಕಿತ ಉಗ್ರನ ಸುಳಿವು ನೀಡಿದ್ರೆ 3 ಲಕ್ಷ ರೂ. ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಚಟುವಟಿಕೆ ನಡೆಸುತ್ತಿದ್ದ ಅಬ್ದುಲ್ ಮತೀನ್ ಅಹ್ಮದ್ ತಾಹಾ(26) ಎಂಬುವನ ಸುಳಿವು ನೀಡಿದವರಿಗೆ ಮೂರು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾದಳ ಪೋಷಿಸಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪ್ರದೇಶದ ಫಿಶ್ ಮಾರ್ಕೆಟ್ ರಸ್ತೆ ನಿವಾಸಿಯಾಗಿರುವ ಅಬ್ದುಲ್ ಮತೀನ್ ತಮಿಳುನಾಡಿನಲ್ಲಿ ಹಿಂದೂ ಮುಖಂಡನ ಹತ್ಯೆ ಮತ್ತು ರಾಜ್ಯದಲ್ಲಿ ಐಸಿಸ್ ಚಟುವಟಿಕೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದಾನೆ.

ಅಬ್ದುಲ್ ಮತೀನ್ ವಿರುದ್ಧ ಜನವರಿಯಲ್ಲಿ ಬೆಂಗಳೂರಿನ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ. ತಮಿಳುನಾಡಿನಲ್ಲಿ ಹಿಂದೂ ಮುಖಂಡ ಸುರೇಶ್ ಎಂಬವರ ಕೊಲೆ ಪ್ರಕರಣದಲ್ಲಿ ಐಸಿಸ್ ಪ್ರಚೋದಿತ ಗುಂಪಿನ ಮೆಹಬೂಬ್ ಬಾಷಾ, ಕ್ವಾಜ ಮೋಹಿದ್ದಿನ್ ಸೇರಿದಂತೆ ಹಲವರನ್ನು ರಾಷ್ಟ್ರೀಯ ತನಿಖಾದಳ ಬಂಧಿಸಿದ್ದು ಅವರಿಗೆ ಅಬ್ದುಲ್ ಮತೀನ್ ಜೊತೆ ಸಂಪರ್ಕ ಇರುವುದು ಗೊತ್ತಾಗಿತ್ತು.

2019 ರಲ್ಲಿ ಮೆಹಬೂಬ್ ಪಾಷ ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗುರಪ್ಪನ ಪಾಳ್ಯ ದಲ್ಲಿ ಸಭೆ ನಡೆಸಿದ್ದು ಅಬ್ದುಲ್ ಮತೀನ್ ಭಾಗಿಯಾಗಿದ್ದ. ಈತನ ಸುಳಿವು ನೀಡಿದವರಿಗೆ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...