alex Certify ಇಂದು ಸಂಜೆ ಬಿಜೆಪಿ ಜನ ಸಂವಾದ ರ್ಯಾಲಿ: ರಾಜ್ಯದ ಜನರೊಂದಿಗೆ ಜೆ.ಪಿ. ನಡ್ಡಾ ಸಂವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಂಜೆ ಬಿಜೆಪಿ ಜನ ಸಂವಾದ ರ್ಯಾಲಿ: ರಾಜ್ಯದ ಜನರೊಂದಿಗೆ ಜೆ.ಪಿ. ನಡ್ಡಾ ಸಂವಾದ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಜನರೊಂದಿಗೆ ಸಂವಾದ ನಡೆಸಲಿದ್ದಾರೆ.

ಇಂದು ಸಂಜೆ 6 ಗಂಟೆಗೆ ಬಿಜೆಪಿ ಕರ್ನಾಟಕ ಜನ ಸಂವಾದ ರ್ಯಾಲಿ ಆಯೋಜಿಸಿದೆ. ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕೇಬಲ್ ಟಿವಿಗಳಲ್ಲಿ ನೇರ ಪ್ರಸಾರದಲ್ಲಿ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಮನೆ ಮನೆಗೆ ಮಾಹಿತಿ ನೀಡಲಾಗುವುದು.

ಜೆ.ಪಿ. ನಡ್ಡಾ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ 2 ನೇ ಅವಧಿಯ 1 ವರ್ಷದ ಸಾಧನೆ, ಕೊರೋನಾ ಸೋಂಕು ತಡೆಯುವ ಬಗ್ಗೆ ಸಂವಾದ ನಡೆಯಲಿದೆ. ಸಿಎಂ ಯಡಿಯೂರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...