alex Certify ಜಿಲ್ಲಾಸ್ಪತ್ರೆ ಆಕ್ಸಿಜನ್ ಸಿಲಿಂಡರನ್ನೇ ಹೊತ್ತೊಯ್ದ ಕಳ್ಳರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲಾಸ್ಪತ್ರೆ ಆಕ್ಸಿಜನ್ ಸಿಲಿಂಡರನ್ನೇ ಹೊತ್ತೊಯ್ದ ಕಳ್ಳರು

ಚಿಕ್ಕಬಳ್ಳಾಪುರ; ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರು ಆಕ್ಸಿಜನ್ ಸಿಲಿಂಡರ್ ಕದಿಯುವುದರಲ್ಲೂ ಕರಾಮತ್ತು ತೋರಿಸುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿದ್ದ ಜಂಬೋ ಆಕ್ಸಿಜನ್ ಸಿಂಡರ್ ಗಳನ್ನೇ ಕದ್ದೊಯ್ದಿರುವ ಘಟನೆ ಆರೋಗ್ಯ ಸಚಿವರ ತವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್ ಗಳು ಕಳ್ಳತನವಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಪಿ.ವಿ. ರಮೇಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೋಮವಾರದಿಂದ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್

ಈ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಗಳ ಕೈವಾಡವಿದ್ದು, ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳೇ ಕೃತ್ಯದಲ್ಲಿ ಶಾಮೀಲಾಗಿ ಆಕ್ಸಿಜನ್ ಸಿಲಿಂಡರ್ ಕದ್ದು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಬಗ್ಗೆಯೂ ಅನುಮಾನವಿದೆ ಎಂದು ದೂರಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...