ಮೈಸೂರು: ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಕೊವಿಡ್ ಪರೀಕ್ಷೆಗೆ ಅಡ್ಡಿಪಡಿಸಿದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ವಿರುದ್ಧ ಸಚಿವ ನಾರಾಯಣಗೌಡ ವಾಗ್ದಾಳಿ ನಡಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಭವನ ಅವರಪ್ಪನ ಮನೆಯದ್ದಾ..? ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ತುಂಬ ದೊಡ್ಡ ತಪ್ಪು. ಮಾಧ್ಯಮದವರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಎಂಎಲ್ಸಿ ಶ್ರೀಕಂಠೇಗೌಡ ಆಡಂಬರ ಮತ್ತು ಪ್ರಚಾರ ಪ್ರಿಯರು. ಇಷ್ಟು ದಿನ ಅವರಿಗೆ ಪ್ರಚಾರ ಸಿಕ್ಕಿರಲಿಲ್ಲ. ಅದಕ್ಕೆ ನಿನ್ನೆ ಕೋರೋನಾ ಟೆಸ್ಟ್ ಬೇಳೆ ನುಗ್ಗಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿ ಪ್ರಚಾರ ಪಡೆದುಕೊಳ್ಳಲು ಇಂತಹ ಕೃತ್ಯವೆಸಗಿದ್ದಾರೆ ಎಂದು ದೂರಿದ್ದಾರೆ.
ಶ್ರೀಕಂಠೇಗೌಡರು ತನ್ನ ಮಗನಿಗೆ ಸರಿಯಾಗಿ ಬುದ್ಧಿ ಕಲಿಸಲಿ. ಕೊರೋನಾ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರಾಜಕಾರಣ ಮಾಡಬಾರದು. ಮಾಧ್ಯಮಗಳು ಆರೋಗ್ಯ ಸಿಬ್ಬಂದಿ ಮೇಲಿನ ದಾಳಿಯನ್ನು ಖಂಡಿಸುತ್ತೇನೆ ಎಂದು ಸಚಿವ ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಶ್ರೀಕಂಠೇಗೌಡ ಮತ್ತು ಅವರ ಪುತ್ರ ಕೃಷಿಕ್ ಗೌಡ ಪತ್ರಕರ್ತರಿಗೆ ಕೊವಿಡ್ ಪರೀಕ್ಷೆ ನಡೆಸಬಾರದೆಂದು ಅಡ್ಡಿಪಡಿಸಿದ್ದು, ಅವರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.