alex Certify ಬಿಗ್ ನ್ಯೂಸ್: ಮೋದಿ ಸ್ಮರಿಸಿದ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಜೀವಿತಾವಧಿವರೆಗೆ ಉಚಿತ ಬಸ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮೋದಿ ಸ್ಮರಿಸಿದ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಜೀವಿತಾವಧಿವರೆಗೆ ಉಚಿತ ಬಸ್ ಪಾಸ್

ಬೆಂಗಳೂರು: ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ ಗಳಲ್ಲಿ , ಜೀವಿತಾವಧಿಯವರೆಗೂ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.

ಆಧುನಿಕ ಭಗೀರಥ, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ ಜಿಲ್ಲೆಯ ‌ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅನನ್ಯ ಪರಿಸರ ಕಾಳಜಿಯನ್ನು ಮತ್ತು ಸಾಧನೆಯನ್ನು , ಪ್ರಧಾನ ಮಂತ್ರಿ ಮೋದಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹ ಕಾಮೇಗೌಡರ ಅಪರಿಮಿತ ಸಾಧನೆಗಾಗಿ ‘ಉಚಿತ ಬಸ್ ಪಾಸ್‌’ ನೀಡಲು ಆದೇಶಿಸಿರುತ್ತಾರೆ. ಕೆರೆಗಳ ನಿರ್ಮಿಸಿ ಕೊಡುಗೆ ನೀಡಿದ ಕಾಮೇಗೌಡರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ ಗಳಲ್ಲಿ ಅವರ ಜೀವಿತಾವಧಿಯವರೆಗೆ, ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲು ಅನುಮತಿಸಲಾಗಿದೆ ಎಂದು ಕೆ ಎಸ್ ಆರ್ ಟಿ‌‌‌ ಸಿ. ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...