alex Certify ಶೋಕಿ ಜೀವನಕ್ಕೆ ಕರುಳ ಕುಡಿಯನ್ನೇ ಮಾರಿದ ತಂದೆ: ಹೊಸ ಮೊಬೈಲ್, ಬೈಕ್ ಖರೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೋಕಿ ಜೀವನಕ್ಕೆ ಕರುಳ ಕುಡಿಯನ್ನೇ ಮಾರಿದ ತಂದೆ: ಹೊಸ ಮೊಬೈಲ್, ಬೈಕ್ ಖರೀದಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ತಿನಕಲ್ಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಒಂದು ಲಕ್ಷ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ನರಸಿಂಹಮೂರ್ತಿ ಮತ್ತು ಮಹಾಲಕ್ಷ್ಮಿ ದಂಪತಿಗೆ 3 ತಿಂಗಳ ಹೆಣ್ಣು ಮಗುವಿದ್ದು, ಸಮೀಪದ ಮಳಮಾಚನಹಳ್ಳಿಯ ದಂಪತಿಗೆ ಮಾರಾಟ ಮಾಡಲಾಗಿದೆ. ಮಗು ಮಾರಾಟ ಮಾಡಿ ಹಣ ಪಡೆದುಕೊಂಡಿದ್ದ ನರಸಿಂಹಮೂರ್ತಿ ಶೋಕಿ ಜೀವನ ನಡೆಸುತ್ತಿದ್ದ. ಇದರಿಂದ ಅನುಮಾನಗೊಂಡ ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಮಗುವನ್ನು ರಕ್ಷಿಸಿದ್ದಾರೆ. ಮಗು ಜನಿಸಿದಾಗಲೇ ಬೆಂಗಳೂರಿನಲ್ಲಿ ಮಾರಾಟ ಮಾಡಲು ಪ್ರಯತ್ನ ನಡೆಸಲಾಗಿತ್ತು. ಆದರೆ. ಆಸ್ಪತ್ರೆಯ ಅಧಿಕಾರಿಗಳು ಇದಕ್ಕೆ ಅವಕಾಶ ನೀಡಿರಲಿಲ್ಲ.

ಈಗ ಮತ್ತೆ ಪೋಷಕರು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ. ಮೊಬೈಲ್, ಬೈಕ್ ಖರೀದಿಸಿ ಶೋಕಿ ಜೀವನ ನಡೆಸುತ್ತಿದ್ದ ನರಸಿಂಹಮೂರ್ತಿ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...