alex Certify ಕೆಜಿ ಹಳ್ಳಿ ಗಲಭೆ ಪ್ರಕರಣ: ಫೇಸ್ ಬುಕ್ ಪೋಸ್ಟ್ ಹಾಕಿದ ‘ಬಿಗ್ ಬಾಸ್’ ಪ್ರಥಮ್ ಗೆ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಜಿ ಹಳ್ಳಿ ಗಲಭೆ ಪ್ರಕರಣ: ಫೇಸ್ ಬುಕ್ ಪೋಸ್ಟ್ ಹಾಕಿದ ‘ಬಿಗ್ ಬಾಸ್’ ಪ್ರಥಮ್ ಗೆ ಬೆದರಿಕೆ

ಕೆಜಿ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಾಟ್ಸಾಪ್ ಮತ್ತು ಫೋನ್ ಕಾಲ್ ನಲ್ಲಿ ‘ಬಿಗ್ ಬಾಸ್’ ವಿನ್ನರ್ ಪ್ರಥಮ್ ಗೆ ವಾರ್ನಿಂಗ್ ಮಾಡಲಾಗಿದೆ. ಇದು ಹೀಗೆ ಮುಂದುವರೆದರೆ ಕಮೀಷನರ್ ಗೆ ಮತ್ತು ಗೃಹ ಸಚಿವರಿಗೆ ದೂರು ಕೊಡುತ್ತೇನೆ ಎಂದು ನಟ ಪ್ರಥಮ್ ಹೇಳಿದ್ದಾರೆ.

ಕೆಜಿ ಹಳ್ಳಿ ಗಲಾಟೆ ಬಗ್ಗೆ ಫೇಸ್ಬುಕ್ನಲ್ಲಿ ಪ್ರಥಮ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ನಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ವಾರ್ ಶುರುವಾಗಿದೆ. ಪೋಸ್ಟ್ ಸಮಾಜದಲ್ಲಿ ಶಾಂತಿ ಕದಡುತ್ತದೆ ಎಂದು ಹೇಳಲಾಗಿದೆ.

ಒಂದು ಸಮುದಾಯವನ್ನು ಅವಹೇಳನ ಮಾಡುವಂತೆ ಇದೆ ಎಂದು ಹೇಳುತ್ತಿದ್ದಂತೆ ಪ್ರಥಮ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆಕೊಟ್ಟು ಪೋಸ್ಟ್ ಡಿಲೀಟ್ ಮಾಡಿದ್ದೇನೆ. ಭಯದಿಂದ ಡಿಲೀಟ್ ಮಾಡಿಲ್ಲ. ಆದರೂ ಕೆಲವು ವಿಕೃತರು ಅಸಭ್ಯವಾಗಿ ಮೆಸೇಜ್, ಕಾಲ್ ಮಾಡುತ್ತಿದ್ದು ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಪ್ರಥಮ್ ತಿಳಿಸಿದ್ದಾರೆ. ದೂರು ನೀಡಿದರೆ ನಿಮ್ಮ ಕುಟುಂಬದವರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಸುಮ್ಮನಿದ್ದೇನೆ ಎಂದೂ ಹೇಳಿದ್ದಾರೆ.

ಇದು ಮನವಿ ಅಥವಾ warning…ಏನಾದ್ರೂ ಅಂದುಕೊಳ್ಳಿ…ನನಗೆ ಕನ್ನಡದ ಜ್ಞಾನ ಬಹಳ ಚೆನ್ನಾಗಿದೆ.ನಾನು ಬಳಸಿರೋ ಪದಗಳ ಬಗ್ಗೆ ಅರಿವೂ ಇದೆ.ತುಂಬಾ…

Posted by Olle Hudga Pratham on Sunday, August 16, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...