alex Certify ಪ್ರೀತಿಸಿ ಮದುವೆಯಾದ ದಂಪತಿ, ಜಗಳದ ವೇಳೆ ನಡೀತು ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದ ದಂಪತಿ, ಜಗಳದ ವೇಳೆ ನಡೀತು ನಡೆಯಬಾರದ ಘಟನೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಜಗಳವಾಗಿದ್ದು, ಜಗಳದ ವೇಳೆ ತಂದೆಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಮೂರು ತಿಂಗಳ ಹೆಣ್ಣು ಮಗುವನ್ನು ತಂದೆ ಶ್ರೀನಿವಾಸ್ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಜನನಿ ಮತ್ತು ಶ್ರೀನಿವಾಸ್ ಪ್ರೀತಿಸಿ ಮದುವೆಯಾಗಿದ್ದು, ದಂಪತಿಯ ಮೂರು ತಿಂಗಳ ಮಗು ಸ್ಪಂದನಾ ಮೃತಪಟ್ಟಿದೆ. ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರ ನಡುವೆ ಆಗಾಗ ಜಗಳವಾಗುತ್ತಿತ್ತು. ಶನಿವಾರ ರಾತ್ರಿ ಜಗಳದ ವೇಳೆ ಪತ್ನಿಯನ್ನು ನೂಕಿದಾಗ ಮಗು ಮಲಗಿದ್ದ ಜೋಳಿಗೆ ಮೇಲೆ ಬಿದ್ದಿದ್ದಾಳೆ.

ಆಗ ಮಗು ಜೋರಾಗಿ ಅಳಲು ಪ್ರಾರಂಭಿಸಿದ್ದರಿಂದ ಕೋಪಗೊಂಡ ಶ್ರೀನಿವಾಸ್ ಮಗುವನ್ನು ಎತ್ತಿ ಬಿಸಾಕಿದ್ದು, ಪ್ರಜ್ಞೆತಪ್ಪಿದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಈ ವೇಳೆಗಾಗಲೆ ಮಗು ಮೃತಪಟ್ಟಿದೆ ಎನ್ನಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...