alex Certify ಪತ್ನಿಯನ್ನು ನಿಂದಿಸಿದ ಪತಿರಾಯ, ಪುತ್ರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯನ್ನು ನಿಂದಿಸಿದ ಪತಿರಾಯ, ಪುತ್ರನಿಂದಲೇ ಘೋರ ಕೃತ್ಯ

ಶಿವಮೊಗ್ಗ: ತಾಯಿಯನ್ನು ನಿಂದಿಸಿದ್ದರಿಂದ ಆಕ್ರೋಶಗೊಂಡ ಪುತ್ರ ತಂದೆಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

ಹಳೆ ಬೊಮ್ಮನಕಟ್ಟೆ ಸಿದ್ದಪ್ಪ ನಗರದ ಮಂಜುನಾಥ(56) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ ಪುತ್ರ ರಾಕೇಶ್(24) ತಂದೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಜುನಾಥ ಅವರ ಹಿರಿಯ ಪುತ್ರಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ತಾಯಿ ಕೂಡ ಆಸ್ಪತ್ರೆಗೆ ತೆರಳಿದ್ದರು.

ಮದ್ಯ ಸೇವಿಸಿ ಮನೆಗೆ ಬಂದಿದ್ದ ಮಂಜುನಾಥ ಮಗನೊಂದಿಗೆ ಜಗಳವಾಡಿ ಪತ್ನಿಯನ್ನು ನಿಂದಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ರಾಕೇಶ್ ಕಬ್ಬಿಣದ ರಾಡ್ ನಿಂ‌ದ ತಲೆಗೆ ಹೊಡೆದಿದ್ದು ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...