alex Certify ಮದ್ಯದ ಅಮಲಿನಲ್ಲಿ ಪತಿಯಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಿನಲ್ಲಿ ಪತಿಯಿಂದಲೇ ಘೋರ ಕೃತ್ಯ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐನೋರಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಪತ್ನಿಗೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.

ಅಂಧನಾಗಿರುವ ಪತಿ ಮಂಜುನಾಥ್ ಮದ್ಯದ ಅಮಲಿನಲ್ಲಿ ಪತ್ನಿಯ ಎದೆ, ಗುಪ್ತಾಂಗ, ದೇಹದ ಭಾಗಗಳನ್ನು ಬಾಯಿಯಿಂದ ಕಚ್ಚಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ರೈಲು ನಿಲ್ದಾಣ ಹಾಗೂ ಪಟ್ಟಣದಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಮಂಜುನಾಥ್ ಇತ್ತೀಚೆಗೆ ರೈಲುಗಳು ಇಲ್ಲದ ಕಾರಣ ಭಿಕ್ಷೆ ಬೇಡಲು ಸಾಧ್ಯವಾಗಿರಲಿಲ್ಲ.

ಪಟ್ಟಣದಲ್ಲಿ ಭಿಕ್ಷೆ ಬೇಡಿ ತಂದ ಹಣದಲ್ಲಿ ಮದ್ಯ ಸೇವನೆ ಮಾಡಿ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದನಲ್ಲದೇ, ನೆರೆಹೊರೆಯವರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ನಾಲ್ಕು ದಿನಗಳಿಂದ ಪತ್ನಿಯ ಮೇಲೆ  ಹಲ್ಲೆ ಮಾಡಿ ದೇಹ ಹಾಗೂ ಗುಪ್ತಾಂಗವನ್ನು ಕಚ್ಚಿ ಗಾಯಗೊಳಿಸಿದ್ದಾನೆನ್ನಲಾಗಿದೆ.

ಈತನಿಂದ ಹಲ್ಲೆಗೊಳಗಾದ ರತ್ನಮ್ಮ ತೀವ್ರವಾಗಿ ಗಾಯಗೊಂಡಿದ್ದು ಆಕೆಯನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...