ಲಾಕ್ ಡೌನ್ ಆದ ನಂತರ ಮೊದಲ ಬಾರಿಗೆ ಪ್ರಯಾಣಿಕರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಇಂದು ಬೆಳಗ್ಗೆಯಿಂದ ಬಸ್ ಸಂಚಾರ ಆರಂಭವಾಗಿದೆ. ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಕಡೆಗಳೆಲ್ಲಾ ಬಸ್ ಸಂಚಾರ ಆರಂಭವಾಗಿದೆ. ಆದರೆ ಒಂದಿಷ್ಟು ಷರತ್ತುಗಳನ್ನು ಹಾಕಿ ಬಸ್ ಸಂಚಾರ ಮಾಡಲಾಗುತ್ತಿದೆ.
ಹೌದು, ಇಂದು ಕೆಎಸ್ಆರ್ಟಿಸಿ ಬಸ್ ಗಳು ಆರಂಭವಾಗಿವೆ. ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಬಸ್ ಸಂಚಾರ ಮಾಡುತ್ತವೆ. ಆದರೆ ಬೇರೆ ಜಿಲ್ಲೆಗಳಿಗೆ ಹೋಗಲು ಸಮಯವನ್ನು ನಿಗಧಿ ಮಾಡಲಾಗಿದೆ. ಇನ್ನು ಬಸ್ ಗಳಲ್ಲಿ ಮೂವತ್ತು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಕೈಗೆ ಸ್ಯಾನಿಟೈಸರ್ ಹಾಕಿ ಬಸ್ ಒಳಗೆ ಹತ್ತಿಸಲಾಗುತ್ತದೆ. ಮಾಸ್ಕ್ ಇಲ್ಲದಿದ್ದರೆ ಪ್ರಯಾಣಕ್ಕೆ ಅವಕಾಶ ಇಲ್ಲ. ಇನ್ನು ಪ್ರತಿಯೊಬ್ಬ ಪ್ರಯಾಣಿಕರ ಹೆಸರು, ವಿಳಾಸ, ಫೋನ್ ನಂಬರ್ ಬಸ್ ಸಿಬ್ಬಂದಿಗಳು ಸಂಗ್ರಹಿಸುತ್ತಾರೆ.
ಇನ್ನು ಚಿಕ್ಕ ಮಕ್ಕಳು ಹಾಗೂ 60 ವರ್ಷ ಮೆಲ್ಪಟ್ಟವರಿಗೆ ಪ್ರಯಾಣಕ್ಕೆ ಅವಕಾಶವಿಲ್ಲ. ಇನ್ನು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡುವುದಿಲ್ಲ. ಹಾಗೂ ಹಿಂದಿನ ಪಾಸ್ ಗಳನ್ನು ಗಣನೆಗೆ ತೆಗೆದುಕೊಳ್ಳಲ್ಲ. ದಿನದ ಪಾಸು ಅಥವಾ ತಿಂಗಳ ಪಾಸ್ ಪಡೆಯಬೇಕು.
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಮುಂಗಡ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಇನ್ನು ಪ್ರಯಾಣಿಕರ ಅನುಗುಣವಾಗಿ ಬಸ್ ಗಳ ಸಂಖ್ಯೆ ಹೆಚ್ಚಿಸಲಾಗುತ್ತದೆ.