ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ನಾಲ್ಕನೆ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದ್ದು, ಇದರಿಂದಾಗಿ ಬಸ್ ಆಟೋ, ಟ್ಯಾಕ್ಸಿ ಸಂಚಾರ ಆರಂಭವಾಗಿದೆ.
ಆದರೆ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಯಾದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ರಸ್ತೆಗಿಳಿದಿರಲಿಲ್ಲ. ಹೀಗಾಗಿ ಸಿಬ್ಬಂದಿ ಮನೆಯಲ್ಲೇ ಇದ್ದು, ತಮಗೆ ಸಂಬಳ ನೀಡಲಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದರು.
ಇದೀಗ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕೆಎಸ್ಆರ್ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ಏಪ್ರಿಲ್ ತಿಂಗಳ ವೇತನ ಮಾಡಿದ್ದೇವೆ. ಮೇ ತಿಂಗಳ ವೇತನವನ್ನೂ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಸರ್ಕಾರ 450 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂಬ ಮಾಹಿತಿ ನೀಡಿದ್ದಾರೆ.