ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಒಂದೇ ಬಾರಿಗೆ ಅಪ್ ಅಂಡ್ ಡೌನ್ ಪ್ರಯಾಣ ದರ ಪಡೆಯುವ ಅಥವಾ ಶೇಕಡ 30 ರಷ್ಟು ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಕೊರೋನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲಿಸಬೇಕಿದೆ. ಹೀಗಾಗಿ ನಿಗದಿತ ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಇರುವುದರಿಂದ ಹೆಚ್ಚುವರಿ ಹೊರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಲಾಕ್ ಡೌನ್ ಬಳಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಊರಿಗೆ ಹೊರಟ ಪ್ರಯಾಣಿಕರು ದುಬಾರಿ ಟಿಕೆಟ್ ದರ ಭರಿಸಬೇಕಿದೆ. ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಭಾರೀ ನಷ್ಟವಾಗಿದೆ. ಈಗ ಸಂಚಾರ ಆರಂಭವಾದರೂ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಕಡಿಮೆ ಪ್ರಯಾಣಿಕರನ್ನು ಕರೆದೊಯ್ಯಬೇಕಿದ್ದು, ಇದು ಹೊರೆಯಾಗುವ ಕಾರಣಕ್ಕೆ ಟಿಕೆಟ್ ದರ ಏರಿಕೆ ಮಾಡಲಾಗುವುದು ಎನ್ನಲಾಗಿದೆ.