ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಉಚಿತವಾಗಿ ಕರೆದುಕೊಂಡು ಹೋಗಲು ಕೆಎಸ್ಆರ್ಟಿಸಿ ಉಚಿತ ಬಸ್ ಸಂಚಾರ ಆರಂಭಿಸಿದೆ.
ನಿನ್ನೆ 15 ಸಾವಿರ ಕಾರ್ಮಿಕರನ್ನು ಬೆಂಗಳೂರಿನಿಂದ ಸುಮಾರು 500 ಬಸ್ ಗಳಲ್ಲಿ ಕರೆದುಕೊಂಡು ಹೋಗಲಾಗಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ವಲಸೆ ಕಾರ್ಮಿಕರನ್ನು ವಿವಿಧ ಜಿಲ್ಲೆಗಳಿಗೆ ಕರೆದುಕೊಂಡು ಹೋಗಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಪ್ರತಿ ಬಸ್ ನಲ್ಲಿ ತಲಾ 30 ಜನರನ್ನು ಕರೆದುಕೊಂಡು ಹೋಗಬೇಕಿದೆ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಿದೆ. ನಿನ್ನೆ ಬೆಂಗಳೂರಿನಿಂದ ಹೊರಟಿದ್ದ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳನ್ನು ಸೇರಿಕೊಂಡಿದ್ದಾರೆ. ಇಂದು ಮತ್ತೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಉಚಿತ ಬಸ್ ಸಂಚಾರ ಆರಂಭವಾಗಲಿದೆ. ಸುಮಾರು 550 ಬಸ್ ಸಂಚಾರಕ್ಕೆ ಸಿದ್ಧತೆ ಆರಂಭವಾಗಿದೆ. ಕಾರ್ಮಿಕರೊಂದಿಗೆ ಹೋಟೆಲ್, ಬೇಕರಿ ಕಾರ್ಮಿಕರು, ಐಟಿ –ಬಿಟಿ ಉದ್ಯೋಗಿಗಳು ಕೂಡ ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.