ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯದಲ್ಲಿ ಮೂರು ವರ್ಷದ ಮಗುವನ್ನು ಮನೆಯಿಂದ ಎಳೆದೊಯ್ದು ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ವಾರ ಹೇಮಂತ್ ಎಂಬ 3 ವರ್ಷದ ಮಗು ಮನೆಯಲ್ಲಿ ಪೋಷಕರೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ಚಿರತೆ ಎಳೆದುಕೊಂಡು ಹೋಗಿ ಕೊಂದು ಹಾಕಿತ್ತು. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು ಅಲ್ಲ್ಲಿ ಬೋನ್ ಇಡಲಾಗಿತ್ತು. ಬೋನಿನೊಳಗೆ ಚಿರತೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಎರಡು ವರ್ಷದ ಗಂಡು ಚಿರತೆ ಇದಾಗಿದ್ದು ಇದೆ ಚಿರತೆ ಮಗುವನ್ನು ಕೊಂದಿರಬಹುದೆಂದು ಹೇಳಲಾಗಿದೆ.