ಮೈಸೂರಿನ ಸುಣ್ಣದಕೇರಿಯಲ್ಲಿ ನಾಳೆಯಿಂದ ಮದ್ಯದಂಗಡಿ ಓಪನ್ ಮಾಡಲು ಅನುಮತಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದ್ದಾರೆ.
ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೆ ವಿರೋಧ ವ್ಯಕ್ತವಾಗಿದ್ದು ಹಲವಾರು ಮಠಾಧೀಶರು ಮತ್ತು ಸಂಘ-ಸಂಸ್ಥೆಗಳು ಮದ್ಯನಿಷೇಧ ಮುಂದುವರೆಸಬೇಕೆಂದು ಒತ್ತಾಯಿಸಿವೆ. ಈ ನಡುವೆ ಸರ್ಕಾರ ಲಾಕ್ಡೌನ್ ನಡುವೆಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮದ್ಯದಂಗಡಿ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಮದ್ಯ ನಿಷೇಧಿಸಿರುವುದರಿಂದ ಕೂಲಿ ಕಾರ್ಮಿಕರು, ಬಡವರ ಕುಟುಂಬಗಳು ನೆಮ್ಮದಿಯಿಂದ ಇವೆ. ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ, ಕುಟುಂಬಗಳ ನೆಮ್ಮದಿ ಹಾಳಾಗುತ್ತದೆ. ಮದ್ಯದಂಗಡಿಗಳಿಗೆ ಬೇರೆ ಕಡೆಗಳಿಂದ ಜನ ಬರುವುದರಿಂದ ಸೋಂಕು ಹರಡುವ ಆತಂಕ ಎದುರಾಗಿದೆ. ಹಾಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದೆಂಬ ಒತ್ತಾಯ ಕೇಳಿ ಬಂದಿದೆ.