ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಭಾರಿ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮೇ 3ರ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ರೆಡ್ ಜೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. ಎಂಎಸ್ಐಎಲ್ ಮತ್ತು ಮದ್ಯದ ಅಂಗಡಿಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿರುತ್ತದೆ. ಅಲ್ಲೇ ಮದ್ಯ ಸೇವಿಸಲು ಅವಕಾಶವಿರುವುದಿಲ್ಲ.
ಸಂಪನ್ಮೂಲ ಕ್ರೋಢೀಕರಣ ಮತ್ತು ಮದ್ಯ ಮಾರಾಟ ಆರಂಭಕ್ಕೆ ಭಾರಿ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮೇ 3ರ ನಂತರ ಅನುಮತಿ ನೀಡಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಅಬಕಾರಿ ಸಚಿವ ಹೆಚ್. ನಾಗೇಶ್, ಅಬಕಾರಿ ಇಲಾಖೆಯ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಸಿಬ್ಬಂದಿಗೆ ಸಂಬಳ ಕೊಡಲು ಹಣ ಬೇಕಿದೆ. ಮೇ 3 ರ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದ್ದು ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.