alex Certify ಗ್ರಾಮೀಣ, ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್: 25 ಲಕ್ಷ ರೂ.ವರೆಗೂ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ, ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್: 25 ಲಕ್ಷ ರೂ.ವರೆಗೂ ಸಾಲ ಸೌಲಭ್ಯ

ಹಾಸನ: ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ (ಎಸ್.ಸಿ, ಎಸ್.ಟಿ, ಓಬಿಸಿ, ಅಲ್ಪಸಂಖ್ಯಾತ ಇತರೆ) ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹೊಸದಾಗಿ ಕೈಗಾರಿಕೆ ಅಥವಾ ಸೇವಾ ಉದ್ಯಮಗಳನ್ನು ಪ್ರಾರಂಭಿಸುವ ಸಂಬಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಉತ್ಪಾದನಾ ವಲಯಕ್ಕೆ 25 ಲಕ್ಷ ರೂ.ಗಳು ಹಾಗೂ ಸೇವಾ ವಲಯಕ್ಕೆ 10 ಲಕ್ಷ ರೂ.ಗಳವರೆಗೆ ಬ್ಯಾಂಕ್ ಮೂಲಕ ಸಾಲ ನೀಡಲಾಗುವುದು. ಅಭ್ಯರ್ಥಿಗಳು https://kviconline.gov.in/pmegpeportal ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಡೈರಿ ಸರ್ಕಲ್ ಹತ್ತಿರ, ಬಿ.ಎಂ.ರಸ್ತೆ, ಹಾಸನ ಕಚೇರಿಯ ದೂರವಾಣಿ ಸಂಖ್ಯೆ: 08172-296217ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...