ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದೆ. ರೈತರಿಗೆ 3 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ದರದ ಸಾಲ ನೀಡಲು ನಿಯಮಗಳನ್ನು ಪರಿಷ್ಕರಿಸಲಾಗಿದೆ.
ಪ್ರತ್ಯೇಕವಾಗಿ 3 – 4 ಮಂದಿ ಅಣ್ಣ ತಮ್ಮಂದಿರಿಗೂ ಸಾಲ ನೀಡಲಾಗುವುದು. ರೈತರು ಸರ್ಕಾರಿ ನೌಕರರಾಗಿದ್ದರೂ ಸಾಲ ಸೌಲಭ್ಯ ಪಡೆಯಬಹುದಾಗಿದೆ ಎಂದು ಸಹಕಾರ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಒಂದೇ ರೈತ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಬಡ್ಡಿರಹಿತ ಸಾಲ ಪಡೆಯಲು ಅಡ್ಡಿಯಾಗಿದ್ದ ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. ಅದೇ ರೀತಿ ಸರ್ಕಾರಿ ನೌಕರರಾಗಿರುವ ರೈತರು ಕೂಡ ಸಾಲ ಪಡೆಯಬಹುದಾಗಿದೆ. ಒಂದೇ ಕುಟುಂಬದಲ್ಲಿರುವ ಅಣ್ಣತಮ್ಮಂದಿರು ಪ್ರತ್ಯೇಕ ಪಹಣಿ, ಸಾಗುವಳಿ ಪತ್ರ ಹೊಂದಿದ್ದರೆ ಸಾಲವನ್ನು ಪಡೆಯಬಹುದು. ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ದರದ ಸಾಲ ನೀಡಲಾಗುವುದು ಎಂದು ಹೇಳಲಾಗಿದೆ.