alex Certify ಆತ್ಮ ನಿರ್ಭರ್ ನಿಧಿ ಯೋಜನೆಯಡಿ 10 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮ ನಿರ್ಭರ್ ನಿಧಿ ಯೋಜನೆಯಡಿ 10 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ಸಾಗರ ನಗರಸಭೆ ವತಿಯಿಂದ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ವಿಶೇಷ ಕಿರುಸಾಲ ಸೌಲಭ್ಯ ನೀಡಲಾಗುವುದು.

ಈ ಸೌಲಭ್ಯ ಪಡೆಯಲು ಬೀದಿಬದಿ ವ್ಯಾಪಾರದ ಕಾರ್ಡ್ ಮತ್ತು ಪರವಾನಿಗೆ ಹೊಂದಿದ ಬೀದಿಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಜುಲೈ 10 ರಿಂದ 2022 ರ ಮಾರ್ಚ್ 31 ರವರೆಗೆ ಈ ಯೋಜನೆಯಡಿಯಲ್ಲಿ ಬ್ಯಾಂಕುಗಳ ಮೂಲಕ 10 ಸಾವಿರ ರೂ. ವರೆಗೆ ಸಾಲಸೌಲಭ್ಯ ನೀಡುವುದು.

ನಿಯಮಿತವಾಗಿ ಮರುಪಾವತಿಗೆ ಶೇ.7 ರಷ್ಟು ಬಡ್ಡಿ ಸಹಾಯಧನ ನೀಡುವುದು. ಡಿಜಿಟಲ್ ವಹಿವಾಟಿಗೆ ಉತ್ತೇಜನ ಹಾಗೂ ಬಹುಮಾನ ನೀಡುವ ಉದ್ದೇಶ ಹೊಂದಿದೆ. ಸಮೀಕ್ಷೆಯಲ್ಲಿ ಗುರುತಿಸಿದ ಅರ್ಹ ಬೀದಿಬದಿ ವ್ಯಾಪಾರಿಗಳು ನಿಗದಿತ ನಮೂನೆಯ ಅರ್ಜಿಯನ್ನು ನಗರಸಭೆ ಸಾಗರದ ಡೇ-ನಲ್ಮ್ ವಿಭಾಗದಿಂದ ಪಡೆದು ಎಲ್ಲಾ ಮೂಲ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಜುಲೈ 22ರ ಒಳಗಾಗಿ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಡೇ-ನಲ್ಮ್ ವಿಭಾಗದಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...