ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜಾರಿಗೊಳಿಸಲಾದ ಲಾಕ್ ಡೌನ್ 4.0 ಮೇ 31 ಕ್ಕೆ ಮುಕ್ತಾಯವಾಗಲಿದೆ.
ಲಾಕ್ ಡೌನ್ ನಡುವೆಯೂ ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿರುವ ಸರ್ಕಾರ ಜೂನ್ 1 ರಿಂದ ಹೋಟೆಲ್, ಮಾಲ್, ರೆಸ್ಟೋರೆಂಟ್, ದೇವಾಲಯ, ಚರ್ಚ್, ಮಸೀದಿ ತೆರೆಯಲು ಅವಕಾಶ ನೀಡುವ ಸಾಧ್ಯತೆ ಇದೆ.
ಇನ್ನು ಮುಂದೆ ಕೊರೋನಾ ಜೊತೆಗೆ ಜೀವನ ನಡೆಸಬೇಕಿದೆ. ಪರಿಸ್ಥಿತಿಯೊಂದಿಗೆ ಹೊಂದಿಕೊಂಡು ಹೋಗಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದು ಈ ಮೂಲಕ ವಿವಿಧ ಚಟುವಟಿಕೆಗಳಿಗೆ ಅನುಮತಿ ನೀಡುವ ಸುಳಿವು ನೀಡಿದ್ದಾರೆ.
ರಾಜ್ಯ ಸರ್ಕಾರದ ವತಿಯಿಂದ ವಿವಿಧ ಚಟುವಟಿಕೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಹೋಟೆಲ್ ಸೇರಿದಂತೆ ಹಲವು ಉದ್ಯಮಗಳಿಂದ ಚಟುವಟಿಕೆ ಆರಂಭಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದು ಅದಕ್ಕೆ ಸಿಎಂ ಭರವಸೆ ನೀಡಿದ್ದಾರೆ. ಹಿನ್ನೆಲೆಯಲ್ಲಿ ಹೋಟೆಲ್ ಸೇರಿದಂತೆ ಹಲವು ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.