alex Certify ಲಾಕ್ಡೌನ್ ಸದ್ಯಕ್ಕೆ ಮುಗಿಯಲ್ಲ, ಈ ಜಿಲ್ಲೆಗಳಿಗೆ ಮಾತ್ರ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಸದ್ಯಕ್ಕೆ ಮುಗಿಯಲ್ಲ, ಈ ಜಿಲ್ಲೆಗಳಿಗೆ ಮಾತ್ರ ರಿಲೀಫ್

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಪ್ರದೇಶ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಲಾಕ್ ಡೌನ್ ಗೆ ವಿನಾಯಿತಿ ನೀಡಲು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲು ಸಿಎಂ ನಿರ್ಧರಿಸಿದ್ದಾರೆ. ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ಗ್ರೀನ್ ಜೋನ್ ನಲ್ಲಿರುವ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಜಿಲ್ಲೆಗಳ ಗ್ರಾಮಾಂತರ ಭಾಗದಲ್ಲಿ ರಸ್ತೆ ಮತ್ತು ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲು ಸೂಚನೆ ನೀಡಲಾಗಿದೆ.

ಪ್ರಧಾನಿ ನೀಡಿದ ಸಲಹೆಯಂತೆ ಲಾಕ್ಡೌನ್ ಮುಂದುವರೆಸುವುದು ಸೂಕ್ತವೆಂದು ಚರ್ಚೆ ನಡೆದಿದ್ದು, ಯಾವ ರೀತಿ ನಿರ್ಬಂಧಗಳನ್ನು ಸಡಿಲಿಕೆ ಮಾಡಬಹುದು? ಯಾವ ಚಟುವಟಿಕೆಗಳಿಗೆ ವಿನಾಯಿತಿ ನೀಡಬಹುದು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ರೆಡ್ ಜೋನ್ ಗಳಲ್ಲಿ ಮೂರನೇ ಹಂತದಲ್ಲಿಯೂ ಲಾಕ್ಡೌನ್ ಮುಂದುವರೆಯಲಿದೆ. ಮೇ 3ರ ಬಳಿಕ ಕಠಿಣ ನಿರ್ಬಂಧ ಇರಲಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೂಡ ಲಾಕ್ ಡೌನ್ ಮುಂದುವರಿಕೆಗೆ ಮನವಿ ಮಾಡಿದ್ದಾರೆ. ಚರ್ಚೆಯ ಬಳಿಕ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...