ಬೆಂಗಳೂರು: ಈಗಾಗಲೇ ಎರಡು ದಿನಗಳ ಲಾಕ್ ಡೌನ್ 3 ರ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಮುಂದುವರೆಸಿದೆ.
ಕೇಂದ್ರ ಸರ್ಕಾರ ಲಾಕ್ಡೌನ್ 4ರ ಮಾರ್ಗಸೂಚಿ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮಗಳ ಕುರಿತು ಚರ್ಚೆ ನಡೆಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ.
ನಾಳೆ ಜಿಲ್ಲೆಗಳ ನಡುವೆ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಆಟೋ, ಟ್ಯಾಕ್ಸಿ, ಕ್ಯಾಬ್ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗುವುದು ಎನ್ನಲಾಗಿದೆ.
ಈಗಾಗಲೇ ಜಿಲ್ಲಾ ವ್ಯಾಪ್ತಿಯೊಳಗೆ ಬಸ್ ಸಂಚಾರಕ್ಕೆ ಅವಕಾಶ ನೀಡಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಅಂತರ್ ಜಿಲ್ಲಾ ಬಸ್ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ಸಾರಿಗೆ ಸಂಸ್ಥೆಗಳಿಂದ ಸಂಚಾರ ಆರಂಭಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.
ಕೇಂದ್ರದ ಮಾರ್ಗಸೂಚಿ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ನಿಯಮಗಳನ್ನು ಬಿಡುಗಡೆ ಮಾಡಲಾಗುವುದು, ನಾಳೆ ಸಿಎಂ ಸಭೆ ನಡೆಸಿ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.