alex Certify ವಿವಿಧ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ: ‘ಆನ್ ಲೈನ್’ ನಲ್ಲಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ: ‘ಆನ್ ಲೈನ್’ ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕಾವೆಂಜರ್‍ಗಳಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಪ್ರಬುದ್ಧ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಯಡಿ 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಸರ್ಕಾರವು ಕೈಗೊಂಡಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಲು ನಿಗದಿ ಮಾಡಿದ್ದ ಕೊನೆಯ ದಿನಾಂಕ ಏ.30 ಆಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ.30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ.

ಅರ್ಹ ಫಲಾನುಭವಿಗಳು ವೆಬ್‍ಸೈಟ್ www.ksskds.ksr.nic.in ಮೂಲಕ ಮೇ 30 ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...