ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಭಾನುವಾರ ಯಾರೂ ಮನೆಯಿಂದ ಹೊರ ಬರಂದತೆ ಸೂಚಿಸಲಾಗಿದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು.
ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಇಲಾಖೆಯಿಂದ ಎಲ್ಲೆಡೆ ಹದ್ದಿನಕಣ್ಣು ಇಡಲಾಗಿದೆ. ಪ್ರಮುಖ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ಲಾಕ್ ಡೌನ್ ವೇಳೆಯಲ್ಲೂ ಕೆಲವರು ಅನಗತ್ಯವಾಗಿ ತಿರುಗಾಟ ನಡೆಸಿದಲ್ಲಿ ಬಿಸಿ ಮುಟ್ಟಿಸಲು ಪೊಲೀಸರು ಸಜ್ಜಾಗಿದ್ದಾರೆ.
ಮನೆಯಿಂದ ಯಾರು ಹೊರ ಬರದಂತೆ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಹೊರಬಂದವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.