alex Certify ವಿರೋಧದ ನಡುವೆಯೂ ಪ್ರೀತಿಸಿದ ತಂಗಿ, ಅಣ್ಣನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರೋಧದ ನಡುವೆಯೂ ಪ್ರೀತಿಸಿದ ತಂಗಿ, ಅಣ್ಣನಿಂದಲೇ ಘೋರ ಕೃತ್ಯ

ಬೆಂಗಳೂರು: ಅಣ್ಣನೇ ತಂಗಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಸುಳ್ಳು ಕತೆ ಕಟ್ಟಿದ ಘಟನೆ ಬೆಳಕಿಗೆ ಬಂದಿದೆ. ತಂಗಿ ಪ್ರೀತಿಸುತ್ತಿದ್ದ ವಿಷಯ ಗೊತ್ತಾದ ನಂತರ ಸಿಟ್ಟಾಗಿದ್ದ ಅಣ್ಣ, ತಂಗಿಯನ್ನು ಕೊಲೆ ಮಾಡಿ ರೈಲ್ವೆ ಹಳಿ ಸಮೀಪ ಮೃತದೇಹ ಎಸೆದು ಬಂದಿದ್ದಾನೆ. ಸಿಸಿಟಿವಿಯಿಂದ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಹೆಣ್ಣೂರಿನ ಟಿ.ಎನ್.ಟಿ. ಲೇಔಟ್ ನಿವಾಸಿಯಾಗಿರುವ 19 ವರ್ಷದ ಯುವತಿಯನ್ನು ಆಕೆಯ ಸಹೋದರ ಕಿರಣ್(25) ಕೊಲೆ ಮಾಡಿದ ಆರೋಪದ ಕೇಳಿ ಬಂದಿದ್ದು ಆತನನ್ನು ಬಂಧಿಸಲಾಗಿದೆ. ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಯುವತಿ ಬಾಡಿಗೆ ಮನೆಯಲ್ಲಿ ತಾಯಿ ಹಾಗೂ ಸಹೋದರನೊಂದಿಗೆ ವಾಸವಾಗಿದ್ದಳು. ಕಿರಣ್ ಆಟೋ ಚಾಲಕನಾಗಿದ್ದು ತಂಗಿ ಯುವಕನೊಬ್ಬನನ್ನು ಪ್ರೀತಿಸುತ್ತಿರುವ ವಿಚಾರ ತಿಳಿದು ಭಾನುವಾರ ಗಲಾಟೆ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಮೃತದೇಹವನ್ನು ಆಟೋದಲ್ಲಿ ತೆಗೆದುಕೊಂಡುಹೋಗಿ ಬೈಯಪ್ಪನಹಳ್ಳಿ ರೈಲ್ವೇ ಹಳಿ ಸಮೀಪ ಎಸೆದು ಬಂದಿದ್ದಾನೆ.

ಸೋಮವಾರ ಬೆಳಗ್ಗೆ ಮೃತದೇಹ ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದಾಗ ಯುವತಿ ನಡೆದುಕೊಂಡು ಹೋಗುವ ಯಾವುದೇ ದೃಶ್ಯಾವಳಿ ಕಂಡುಬಂದಿಲ್ಲ. ಆಟೋ ಬಂದು ಹೋಗಿರುವುದು ಗೊತ್ತಾಗಿ ಕಿರಣ್ ನನ್ನು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬಯಲಿಗೆ ಬಂದಿದೆ. ಬೈಯಪ್ಪನಹಳ್ಳಿ ರೈಲ್ವೇ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...