alex Certify ಬ್ರಹ್ಮಗಿರಿ ಬೆಟ್ಟ ಕುಸಿದು ನಾರಾಯಣಾಚಾರ್ ಕುಟುಂಬದ ಐವರು ನಾಪತ್ತೆ ಪ್ರಕರಣ: ಒಬ್ಬರ ಮೃತದೇಹ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರಹ್ಮಗಿರಿ ಬೆಟ್ಟ ಕುಸಿದು ನಾರಾಯಣಾಚಾರ್ ಕುಟುಂಬದ ಐವರು ನಾಪತ್ತೆ ಪ್ರಕರಣ: ಒಬ್ಬರ ಮೃತದೇಹ ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣಾಚಾರ್ ಕುಟುಂಬದ ಐವರು ನಾಪತ್ತೆಯಾಗಿದ್ದು ಮೂರು ದಿನಗಳ ನಂತರ ಒಬ್ಬರ ಮೃತದೇಹ ಪತ್ತೆಯಾಗಿದೆ.

ನಾರಾಯಣಾಚಾರ್ ಅವರ ಹಿರಿಯ ಸಹೋದರ ಆನಂದ ತೀರ್ಥ ಸ್ವಾಮೀಜಿ ಮೃತದೇಹ ಶೋಧ ಕಾರ್ಯಾಚರಣೆಯ ವೇಳೆ ಸಿಕ್ಕಿದೆ. ಬೆಟ್ಟ ಕುಸಿದ ನಂತರ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಭಾರಿ ಮಳೆ ಮತ್ತು ಕೆಸರು ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಇವತ್ತು ಕಾರ್ಯಾಚರಣೆ ಮುಂದುವರೆದು ಮನೆಯಿದ್ದ ಸ್ಥಳದಿಂದ ಸುಮಾರು ಹತ್ತು ಅಡಿ ದೂರದಲ್ಲಿ ಮಣ್ಣಿನೊಳಗೆ ಆನಂದ ತೀರ್ಥ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ನಾರಾಯಣಾಚಾರ್, ಅವರ ಪತ್ನಿ ಶಾಂತಾ, ಮತ್ತಿಬ್ಬರ ಪತ್ತೆ ಕಾರ್ಯ ನಾಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...